ಪೋಸ್ಟ್‌ಗಳು

ಡಿಸೆಂಬರ್, 2022 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಪರಿಸರದ ಮೇಲೆ ಮಾನವನ ದೌರ್ಜನ್ಯ

ನಾವು ವಾಸಿಸುತ್ತಿರುವ ಸುತ್ತಮುತ್ತಲಿನ ವಾತಾವರಣವೇ ನಮ್ಮ ಪರಿಸರ. ಇದು ಮಾನವನ ಸಾಮಾಜಿಕ, ಮಾನಸಿಕ, ದೈಹಿಕ ಬೆಳವಣಿಗೆಗಳ ಮೇಲೆ ಪರಿಣಾಮ ಬೀರುತ್ತದೆ. ಪರಿಸರವಿಲ್ಲದೆ ನಮ್ಮ ಅಸ್ತಿತ್ವಕ್ಕೆ ಯಾವುದೇ ಬೆಲೆಯಿಲ್ಲ. ಇಂದೂ ಕೂಡ ಪ್ರತಿಯೊಬ್ಬರೂ ಪರಿಸರದ ಬಗ್ಗೆ ಅರಿಯುವ ಅಗತ್ಯವಿದೆ.              ಸುತ್ತಮುತ್ತಲೂ ವೈವಿಧ್ಯಮಯವಾದ ನಿಸರ್ಗದ ಸೊಬಗಿದೆ. ಹಲವಾರು ಗಿಡ ಮರಗಳಿವೆ. ವಿವಿಧ ಪ್ರಕಾರದ ಪ್ರಾಣಿ ಪಕ್ಷಿಗಳಿಗೆ. ಅನೇಕ ಸೂಕ್ಷ್ಮಜೀವಿಗಳಿವೆ. ಗುಡ್ಡ,ಬೆಟ್ಟ, ದೊಡ್ಡ ದೊಡ್ಡ ಪರ್ವತ ಶಿಖರಗಳು ಇದೆ. ಆದರೆ ವಿಜ್ಞಾನ,ತಂತ್ರಜ್ಞಾನ, ಅಭಿವೃದ್ಧಿ, ಆಧುನಿಕತೆ, ನಗರೀಕರಣ, ಕೈಗಾರೀಕರಣ ಎಂಬ ಹಲವು ಕಾರಣಗಳಿಗಾಗಿ ಅನೇಕ ರೀತಿಯಲ್ಲಿ ಅರಿತೋ ಅರಿಯದೆಯೋ ಪರಿಸರಕ್ಕೆ ತೀವ್ರ ಹಾನಿಯನ್ನುಂಟು ಮಾಡುತ್ತಿದ್ದೇವೆ.                  ಇತ್ತೀಚೆಗಂತೂ ವಿಸ್ತರಣೆ ಹೊಂದುತ್ತಿರುವ ರೈಲು ಮಾರ್ಗ, ವಾಹನಗಳಿಗಾಗಿ ರಚನೆಯಾಗುತ್ತಿರುವ ರಸ್ತೆಗಳು,ದೊಡ್ಡ ದೊಡ್ಡ ಕಟ್ಟಡಗಳಿಗಾಗಿ ನಿರಂತರವಾಗಿ ಕಡಿಯುತ್ತಿರುವ ಮರಗಳು,ಇತ್ಯಾದಿಗಳಿಂದ ಮಾಲಿನ್ಯಗಳು ಹೆಚ್ಚಾಗುತ್ತಿದ್ದು ಹವಾಮಾನ ವೈಪರಿತ್ಯ ಉಂಟಾಗುತ್ತಿದೆ. ಅಲ್ಲದೆ ಹೆಚ್ಚುತ್ತಿರುವ ಜನಸಂಖ್ಯೆ, ಹೊಗೆ ಬರುವ ವಾಹನ, ವಾಹನಗಳ ಸಂದಣಿ, ಪ್ಲಾಸ್ಟಿಕ್ ಇತ್ಯಾದಿಗಳಿಂದ ನಮ್ಮ ಪರಿಸರ ಹಾಳಾಗುತ್ತಿದೆ.                      ನಾವು ನಮ್ಮ ಸ್ವಾರ್ಥಕ್ಕಾಗಿ ಮರ ಗಿಡಗಳನ್ನು ಕಡಿದು ಹಾಕುತ್ತಿದ್ದೇವೆ. ಇದರಿಂದಾಗಿ ಹಸಿರು ಎಂಬುದು

ನನ್ನ ಕನಸಿನ ಭಾರತದ ಹಳ್ಳಿಗಳು

"ಹಳ್ಳಿಗಳು ಪಟ್ಟಣಿಗರ ಅನ್ನ ನೀಡುವ ಬಟ್ಟಲು "ಎಂಬ ಮಾತಿದೆ. ಭಾರತದ ಅಭಿವೃದ್ಧಿಯ ತಳಪಾಯವೇ ಹಳ್ಳಿಗಳು. ಪ್ರಾಚೀನ ಕಾಲದಿಂದ ತನ್ನ ಸಂಸ್ಕೃತಿ,  ಸಂಪ್ರದಾಯ, ಆಚಾರ ವಿಚಾರ ಪಾರಂಪರಿಕ ವೈದ್ಯ ಪದ್ಧತಿ ಹಾಗೂ ವಿಶಿಷ್ಟ ಜೀವನಶೈಲಿಯಲ್ಲಿ ಜೀವಂತಿಕೆಯನ್ನು ಉಳಿಸಿಕೊಂಡು ಬಂದಂತಹ ಅಪಾರ ವಿಶೇಷತೆ ನಮ್ಮ ಹಳ್ಳಿಗಳದ್ದು.ಹಳ್ಳಿಗಳಲ್ಲಿ ಕಾಣುವ ಸಂಸ್ಕಾರ, ನೈತಿಕತೆಯ ಮೌಲ್ಯಗಳು, ಆಚರಣೆಗಳು,ಹಳ್ಳಿ ಮಣ್ಣಿನ ಮೇಲೆ ಅಲ್ಲಿನ ಜನರಿಗಿರುವ  ಅಕ್ಕರೆ ಪದಗಳಲ್ಲಿ ಹಿಡಿದಿಡಲು ಅಸಾಧ್ಯ. ಅನ್ನ ನೀಡುವ ಭೂಮಿಯನ್ನು ಸಾಕ್ಷಾತ್ ದೈವವೆಂದು ಪೂಜಿಸುವ ಮನಸು ನಮ್ಮ ಹಳ್ಳಿಗರದ್ದು. ಇಲ್ಲಿನ ಅನೇಕ ಜಾನಪದ ಸಾಂಪ್ರದಾಯಿಕ ಶೈಲಿಗಳು ವಿದೇಶದಲ್ಲಿಯು ಮನ್ನಣೆ ಪಡೆದಿದೆ.               ಭಾರತದ ಹಳ್ಳಿಗಳಲ್ಲಿರುವ ಅತ್ಯದ್ಭುತ ವಿಶೇಷತೆಗಳು ಇರಲು ಸಾಧ್ಯವಿಲ್ಲ. ಆಧುನಿಕರಣದತ್ತ ಮುಖ ಮಾಡುತ್ತಿರುವ ನಮ್ಮ ಸಮಾಜದ ಮನಸ್ಸಿನಲ್ಲಿ ಹಳ್ಳಿಗಳೆಂದರೆ ವಿಚಿತ್ರ ತಾತ್ಸಾರ ಮನೋಭಾವ ಎದ್ದು ಕಾಣುತ್ತಿದೆ. ಹಳ್ಳಿಗಳೆಂದರೆ ಕೇವಲ ಅನಾಗರಿಕರ ತಾಣವೆಂದು ಮೂಗು ಮುರಿಯುವರು ಸಹ ಇದ್ದಾರೆ. ಹಳ್ಳಿಗಳಲ್ಲಿನ ಭೂಮಿಗಳನ್ನು ಕೈಗಾರಿಕೆಗೆ ಬಳಸಿಕೊಂಡರೆ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂಬ ನಿಲುವನ್ನು ವಾದಿಸುವವರು ಸಹ ಇದ್ದಾರೆ. ಆದರೆ ದೇಶ ಅಭಿವೃದ್ಧಿ ಹೊಂದಬೇಕೆಂದರೆ ಹಳ್ಳಿಗಳ ಅಭಿವೃದ್ಧಿಯಿಂದ ಸಾಧ್ಯವೇ ಹೊರತು ಕೈಗಾರಿಕೆಗಳಿಂದ ಪರಿವರ್ತನೆ ಹೊಂದಿ ನಶಿಸಿ ಹೋದ ಹಳ್ಳಿಗಳ ಹೆಸರಿನಿಂದಲ್

ಬೆಳಕು

ಬೆಳಕು ಏನಿದು ಬೆಳಕು? ಎಲ್ಲಿದೆ ಬೆಳಕು? ಹೇಗಿರುತ್ತದೆ ಬೆಳಕು? ಈ ಬೆಳಕಿನ ಬಗ್ಗೆ ಪ್ರಶ್ನೆಗಳು ನನಗೆ ಆಗಾಗ ಹುಟ್ಟುತ್ತಿರುತ್ತವೆ.   ಬೆಳಕಿನ ಬಗೆಗೆ ನನ್ನ ಮನದಲ್ಲಿ ಪ್ರಶ್ನೆಗಳುಮೂಡಿದಾಗಲೆಲ್ಲ ನನ್ನಲ್ಲಿಯೇ ನಾನು ಉತ್ತರವನ್ನು ಕಂಡುಕೊಳ್ಳಲು ಪ್ರಯತ್ನಿಸುತ್ತಿದೆ.  ನನ್ನ ಪ್ರಕಾರ ಬೆಳಕು ಎಂಬುವುದು ಪ್ರತಿಯೊಬ್ಬರಿಗೂ ಬೇರೆ ಬೇರೆ ರೂಪದಲ್ಲಿ ತೋರುತ್ತದೆ.  ಬೆಳಕು ಒಂದು ಶಾಂತಿಯ ಸಂಕೇತ,  ಬೆಳಕು ಒಂದು ಕ್ರಾಂತಿಯ ಸಂಕೇತ, ಅಭಿವೃದ್ಧಿ, ಯಶಸ್ಸು , ಹೊಸ ಹುಮ್ಮಸ್ಸುಗಳ ಸಮ್ಮಿಲನ.    ನಾವುಗಳು  ಜಗತ್ತಿನ ಪ್ರತಿಯೊಂದು ವಸ್ತು ವಿಷಯಗಳನ್ನು ನಮ್ಮ ಪರಿಸ್ಥಿತಿಗಳಿಗೆ ಅನುಗುಣವಾಗಿ ನಾವು ಹೊಲಿಸುತ್ತೇವೆ , ಹಾಗೆಯೇ ಬೆಳಕು ಕೂಡ..!    ಈಗ ಬೆಳಕು , ಇದನ್ನೇ ತೆಗೆದುಕೊಂಡರೆ ಇದನ್ನು ಹಲವಾರು ಜನರು ಹಲವು ದೃಷ್ಟಿಕೋನಗಳಿಂದ ನೋಡುವರು .  ಬಡವರಿಗೆ ಕಷ್ಟ ಕಾಲದಲ್ಲಿ ನಿಧಿ ಸಿಕ್ಕಾಗ ಆಗುವ ಆನಂದದಲ್ಲಿ , ರೈತನಿಗೆ ಬರಗಾಲದಲ್ಲಿ  ಮಳೆ ಬಂದಾಗ ವ್ಯಕ್ತ ಪಡಿಸುವ ಸಂತೋಷದಲ್ಲಿ , ಒಬ್ಬ ಅಂದನಿಗೆ ದೃಷ್ಟಿ ಬಂದು , ಅವನು ತನ್ನ ತಂದೆ ತಾಯಿಯರನ್ನು ನೋಡಿದ ಮೊದಲ ನೋಟದಲ್ಲಿ, ನಿರಂತರ ಪರಿಶ್ರಮದ ಫಲದಲ್ಲಿ ನಾವು ಬೆಳಕಿನ ಅನುಭವ ಕಾಣಬಹುದು. ಇದನ್ನು  ಕೆಲವರು ಬಹಿರಂಗದಲ್ಲಿಅನಭವಿಸಿದರೆ ,ಕೆಲವರು ಅಂತರಂಗಗಳಲ್ಲಿ ಅನುಭವಿಸುವರು.  ಕನ್ನಡದ ಷೇಕ್ಸ್ ಪಿಯರ್ ಕುವೆಂಪುರವರ ಗದ್ಯ ಹಾಗೂ ಕಾವ್ಯಗಳಲ್ಲಿ ,  ಬೇಂದ್ರೆ ಅವರ ಪದ್ಯಗಳಲ್ಲಿ , ಡಿವಿಜಿ ಅವರ  ಕಗ್ಗಗಳಲ್ಲ