ಹೆಚ್ಚುತ್ತಿರುವ ವೃದ್ಧಾಶ್ರಮಗಳು ಹಿಂದಿನ ಕಾಲದಲ್ಲಿ ತಂದೆ ತಾಯಿಯನ್ನು ದೇವರಂತೆ ಕಾಣುತ್ತಿದ್ದರು.ಆದರೆ ಈಗ ಕಾಲ ಬದಲಾಗಿದೆ.ಈ ಕಾಲದಲ್ಲಿ ಹೆತ್ತ ತಂದೆ ತಾಯಿಯನ್ನು ಮಕ್ಕಳು ವೃದ್ಧಾಶ್ರಮಗಳಿಗೆ ಸೇರಿಸುತ್ತಿದ್ದಾರೆ. ಇದೊಂದು ಪಾಪ ಕೃತ್ಯ.ಇತ್ತೀಚೆಗಂತೂ ವೃದ್ಧಾಶ್ರಮಗಳ ಸಂಖ್ಯೆ ಬಹಳ ಹೆಚ್ಚುತ್ತಿದೆ. ತಂದೆ ತಾಯಿ ತಮ್ಮ ಮಕ್ಕಳು ಓದಬೇಕು, ಚೆನ್ನಾಗಿ ಓದಿ ದೊಡ್ಡ ನೌಕರಿ ಪಡೆಯಬೇಕು ಆಗ ಸಮಾಜದಲ್ಲಿ ತಮಗೆ ಸಿಗುವ ಗೌರವವೇ ಬೇರೆಯಾಗಿರುತ್ತದೆ ಎಂದುಕೊಳ್ಳುತ್ತಿದ್ದರು. ಹಾಗಾಗಿ ಮಕ್ಕಳನ್ನು ಲಕ್ಷ ಲಕ್ಷ ಕೊಳ್ಳೆ ಹೊಡೆಯುವ ಖಾಸಗಿ ಶಾಲೆಗಳಿಗೆ ಸೇರಿಸುತ್ತಿದ್ದಾರೆ. ಒಂದೊಳ್ಳೆಯ ವಿದ್ಯೆಯನ್ನು ಗಳಿಸಿ ಮಕ್ಕಳು ಉನ್ನತ ಶಿಕ್ಷಣಕ್ಕಾಗಿ ಬೇರೆ ದೇಶಗಳಿಗೆ ಹೋಗಿಬಿಡುತ್ತಾರೆ.ನಂತರ ಅಲ್ಲೇ ಉದ್ಯೋಗವನ್ನು ಹುಡುಕಿ ಮದುವೆ ಕೂಡ ಮಾಡಿಕೊಂಡು ಅಲ್ಲೇ ಠಿಕಾಣಿ ಹೂಡುತ್ತಾರೆ. ಹಿರಿಯ ನಾಗರಿಕರು ತಮ್ಮ ವೃದ್ಧಾಪ್ಯದಲ್ಲಿ ಸ್ವತಂತ್ರವಾಗಿ ಬದುಕಲು ಸಾಧ್ಯವಾಗುವುದಿಲ್ಲ.ಹಾಗೂ ವೃದ್ದಾಪ್ಯ ವಯಸ್ಸಿನಲ್ಲಿ ವಯಸ್ಕರಿಗೆ ಆರೈಕೆಯ ಅವಶ್ಯಕತೆ ಬಹಳ ಇರುತ್ತದೆ. ವೃದ್ಧರಿಗೆ ಇವೆಲ್ಲವನ್ನು ನೀಗಿಸುವ ಒಂದೇ ಒಂದು ಮಾರ್ಗ ಎಂದರೆ ಅದೇ ವೃದ್ಧಾಶ್ರಮಗಳು. ನಮ್ಮ ದೇಶದಲ್ಲಿ ಅತಿ ಹೆಚ್ಚ...
ಈ ಬ್ಲಾಗ್ನ ಜನಪ್ರಿಯ ಪೋಸ್ಟ್ಗಳು
ಪ್ರಕೃತಿಯ ಮಡಿಲಿನಲ್ಲೊಂದು ಸುಂದರ ತಾಣ ಮತ್ತಿಘಟ್ಟ
ಮಲೆನಾಡಿನಲ್ಲಿ ಹುಟ್ಟುವುದೇ ಒಂದು ಅದೃಷ್ಟ. ಪ್ರಕೃತಿಯ ನಡುವಿನ ಸೊಬಗಿನ ತಾಣ ಶಿರಸಿ. ಶಿರಸಿಯಲ್ಲೊಂದು ಸುಂದರವಾದ ಪುಟ್ಟದಾದ ಊರು ಮತ್ತಿಘಟ್ಟ . ಇಲ್ಲಿನ ಹಸಿರಿನಿಂದ ಕಂಗೊಳಿಸುವ ಪ್ರಕೃತಿ, ಪ್ರಶಾಂತ ವಾತಾವರಣ, ತಂಪಾಗಿ ಬೀಸುವ ತಂಗಾಳಿ, ಚಿಲಿಪಿಲಿಗುಡುತ್ತಿರುವ ಹಕ್ಕಿಗಳ ಕಲರವ, ಕಾಡುಪ್ರಾಣಿಗಳು ಹಾಗೂ ಔಷಧೀಯ ಗುಣವಿರುವ ಗಿಡಗಳು, ಅಲ್ಲಲ್ಲಿ ಸಣ್ಣ ಸಣ್ಣದಾಗಿ ಹರಿಯುವ ಹೊಳೆಗಳು, ಇವೆಲ್ಲವೂ ನೋಡಲು ಬಲು ಸುಂದರ. ಆ ದಟ್ಟವಾದ ಕಾಡಿನಲ್ಲಿ ದೂರ ದೂರದಲ್ಲಿ ಒಂದೊಂದು ಮನೆಗಳು, ಯಾವ ಗಲಾಟೆ ಗದ್ದಲಗಳಿಲ್ಲದೆ ವಾಸಿಸುತ್ತಿರುವ ಜನರು, ಮನೆಯ ಸುತ್ತಮುತ್ತ ಇರುವ ಅಡಿಕೆ ಮರಗಳು, ತೆಂಗಿನ ಮರಗಳನ್ನು ನೋಡುವುದೇ ಆನಂದ . ಮನೆಯ ಮುಂದಿರುವ ಹೊಳೆ , ಆ ಹೊಳೆಯ ನೀರು ಹರಿಯುವ ಜುಳು ಜುಳು ಸದ್ದು ಅದನ್ನು ಕೇಳಿಸಿಕೊಳ್ಳುವುದೇ ಒಂದು ಅದ್ಭುತ. ಇನ್ನು ಮಳೆಗಾಲದಲ್ಲಂತೂ ಬಲು ಸೊಗಸಾದ ಊರು ನಮ್ಮೂರು, ತುಂಬಿ ಹರಿಯುವ ಹೊಳೆ, ಅಚ್ಛಹಸಿರಿನಿಂದ ಕೂಡಿರುವ ಪ್ರಕೃತಿ. ನಮ್ಮ ಊರ...
ಅಡಕೆ ಬೀಳದಿರಲಿ ಕೆಳಕ್ಕೆ
ಮಲೆನಾಡು ಭಾಗದ ಪ್ರಮುಖ ಜಿಲ್ಲೆ ಉತ್ತರ ಕನ್ನಡ .ಮಲೆನಾಡು ಮತ್ತು ಕರಾವಳಿ ಪ್ರದೇಶವನ್ನು ಒಳಗೊಂಡಿದ್ದು, ರಾಜ್ಯದಲ್ಲಿನ ಹೆಚ್ಚು ಮಳೆ ಬೀಳುವ ಜಿಲ್ಲೆಗಳಲ್ಲಿ ಒಂದು. ನಾವು ಇಲ್ಲಿ ತಲೆತಲಾಂತರದಿಂದಲೂ ಅಡಕೆಯನ್ನೇ ಮುಖ್ಯ ಬೆಳೆಯನ್ನಾಗಿ ಬೆಳೆದುಕೊಂಡು ಬಂದಿದ್ದೇವೆ. ಸಾಂಪ್ರದಾಯಿಕವಾಗಿ ಅಡಕೆ ಬೆಳೆಯುವ ಪ್ರದೇಶವಿದು. ಒಂದು ಕಾಲದಲ್ಲಿ ರಾಜ್ಯದಲ್ಲೇ ಅತ್ಯಂತ ಹೆಚ್ಚು ಅಡಕೆ ಬೆಳೆಯುವ ಜಿಲ್ಲೆ ನಮ್ಮದಾಗಿತ್ತು. ಸುಮಾರು ಹದಿನೈದು ವರ್ಷಗಳಿಂದೀಚೆ ಅಡಕೆಗೆ ಉತ್ತಮ ದರ ಬರಲು ಆರಂಭವಾದ್ದರಿಂದ ಅಸಾಂಪ್ರದಾಯಿಕ ಪ್ರದೇಶದಲ್ಲೂ ಅಡಕೆ ತೋಟಗಳು ತಲೆಯೆತ್ತತೊಡಗಿದವು. ನಮ್ಮದು ಗುಡ್ಡಗಾಡು ಪ್ರದೇಶವಾದ್ದರಿಂದ, ಮಳೆ ಹೆಚ್ಚು ಬೀಳುವುದರಿಂದ, ಮಣ್ಣಿನ ಫಲವತ್ತತೆಯು ಸಾಮಾನ್ಯವಾಗಿರುವುದರಿಂದ ಸಹಜವಾಗಿ ತೋಟಗಳು ಹೆಚ್ಚಿನ ಕೆಲಸವನ್ನು ಬಯಸುತ್ತಿವೆ. ಆದರೆ ಬಯಲು ಸೀಮೆಗಳಲ್ಲಿ ನಮ್ಮಲ್ಲಿರುವ ಯಾವ ಸಮಸ್ಯೆಯೂ ಇಲ್ಲದಿರು ವುದರಿಂದ ಕಡಿಮೆ ಖರ್ಚಿನಲ್ಲಿ ತೋಟದ ನಿರ್ವಹಣೆ ಆಗುವುದರೊಂದಿಗೆ ಉತ್ತಮ ಫಸಲು ಕೂಡ ದೊರೆಯುತ್ತದೆ. ಆದರೆ ಹೀಗೆ ಆಗಲು ಸಾಕಷ್ಟು ನೀರು ಬೇಕು ಎನ್ನುವುದನ್ನೂ ಮರೆಯುವಂತಿಲ್ಲ. ...
ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ